ಅ.18: ರಾಜ್ಯ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಮಂಗಳೂರಿಗೆ ಭೇಟಿ
Update: 2018-10-16 15:42 GMT
ಮಂಗಳೂರು, ಅ. 16: ರಾಜ್ಯ ವಕ್ಫ್ ಮತ್ತು ಹಜ್ ಸಚಿವ ಝಮೀರ್ ಅಹ್ಮದ್ ಖಾನ್ ಅ.18ರಂದು ಬೆಳಗ್ಗೆ 10.30ಕ್ಕೆ ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಆಝಾದ್ ಭವನಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭ ಅವರು ವಕ್ಫ್ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಹಾಗಾಗಿ ಮಸೀದಿ, ಮದ್ರಸ ಇತ್ಯಾದಿ ವಕ್ಫ್ ಸಂಸ್ಥೆಗಳ ಪದಾಧಿಕಾರಿ ಗಳು ಅನುದಾನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸೂಕ್ತ ದಾಖಲೆಯೊಂದಿಗೆ ಸಲ್ಲಿಸಬಹುದಾಗಿದೆ ಎಂದು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಕಣಚೂರು ಮೋನು ಪ್ರಕಟನೆಯಲ್ಲಿ ತಿಳಿಸಿದ್ದಾರೆ.