ಬಿಹಾರ: ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ

Update: 2018-10-16 16:53 GMT

ಪಾಟ್ನಾ, ಅ. 16: ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಬಿಹಾರದ ಬೇಗುಸರಾಯಲ್ಲಿ ಮಂಗಳವಾರ ದಾಳಿ ನಡೆದಿದೆ. ದಾಳಿಯಿಂದ ವಾಹನದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ವಾಹನ ಜಖಂಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಈ ದಾಳಿಯನ್ನು ರಾಜಕೀಯ ಪ್ರೇರಿತ ಎಂಬುದನ್ನು ಕನ್ಹಯ್ಯ ಕುಮಾರ್ ನಿರಾಕರಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕನ್ಹಯ್ಯ ಕುಮಾರ್ ಅವರು ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News