ಭರ್ಜರಿ ಗೆಲುವಿನ ವಿಶ್ವಾಸ: ಬಿ.ವೈ.ರಾಘವೇಂದ್ರ

Update: 2018-10-16 17:17 GMT

ಬೈಂದೂರು, ಅ.16: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಪೂರ್ಣ ವಿಶ್ವಾಸ ಪಕ್ಷಕ್ಕೆ ಹಾಗೂ ತನಗೆ ಇರುವುದಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬೈಂದೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ, ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು. ಈ ಹಿಂದೆ ಬೈಂದೂರು ವಿಧಾನಸಭಾ ಕ್ಷೇತ್ರ ಒಳಗೊಂಡ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕೆಲಸ ಮಾಡಿದ್ದೇನೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಪೂರ್ಣ ಅರಿವು ನನಗಿದೆ ಎಂದರು.

ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಥಮ ಆದ್ಯತೆಯಲ್ಲಿ ಪರಿಹರಿಸಬೇಕಾಗಿದೆ. ನೆನೆಗುದಿಗೆ ಬಿದ್ದಿರುವ ವಾರಾಹಿ ಯೋಜನೆಯ ಮುಖಾಂತರ ಕುಂದಾಪುರ, ಬೈಂದೂರಿನ ಕೃಷಿಗೆ ನೀರನ್ನು ಪೂರೈಸುವ ಕೆಲಸ ಶೀಘ್ರ ಆಗಬೇಕಾಗಿದೆ. ಅದೇ ರೀತಿ ಜಿಲ್ಲೆಯ ಮರಳು ಸಮಸ್ಯೆ ಅತ್ಯಂತ ಕ್ಲಿಷ್ಟಕರವಾಗಿದ್ದು, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುುದಾಗಿ ಜನರಿಗೆ ಭರವಸೆ ನೀಡಿದರು.

ಸಭೆಯನ್ನುದ್ದೇಶಿಸಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯೆ ಶೋಭ ಕರಂದ್ಲಾಜೆ ಮಾತನಾಡಿ, ಪ್ರಸ್ತುತ ಸಂಸತ್ತಿನ ಅವಧಿ ಕೇವಲ 5-6 ತಿಂಗಳು ಇದ್ದರೂ, ಈ ಚುನಾವಣೆ ನಮಗೆ ಸವಲಾಗಿದ್ದು ಈ ಚುನಾವಣೆಯಲ್ಲಿ ರಾಘವೇಂದ್ರರನ್ನು ಬಹುಮತದಿಂದ ಗೆಲ್ಲಿಸಬೇಕಾಗಿದೆ ಎಂದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪುಜಾರಿ ಮಾತನಾಡಿದರು. ಸಭೆಯಲ್ಲಿ ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಸಂಧ್ಯಾ ರಮೇಶ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News