ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಿಗೆ ಆದ್ಯತೆ ನೀಡಿ: ಸಿಎಂಗೆ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಪತ್ರ

Update: 2018-10-17 12:38 GMT

ಬೆಂಗಳೂರು, ಅ. 17: ಅಕ್ರಮ-ಸಕ್ರಮ, ಭೂ ನ್ಯಾಯಮಂಡಳಿ ಸೇರಿ ಇನ್ನಿತರ ತಾಲೂಕು-ಜಿಲ್ಲಾ ಮಟ್ಟದ ಸಮಿತಿಗಳ ಪುನರ್ ರಚನೆ ವೇಳೆ 2:1ರ ಅನುಪಾತದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಪ್ರೋತ್ಸಾಹಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಶಾಸಕರಿರುವ ಕ್ಷೇತ್ರ ಮತ್ತು ತಾಲೂಕುಗಳಲ್ಲಿ ಕಾಂಗ್ರೆಸ್ ಪಕ್ಷವು ಎರಡನೇ ಸ್ಥಾನದಲ್ಲಿದ್ದ 2:1ರ ಅನುಪಾತದಲ್ಲಿ ಸದಸ್ಯರನ್ನು ನೇಮಕ ಮಾಡಬೇಕು. ಈ ಬಗ್ಗೆ ತಾನು ಮುತುವರ್ಜಿ ವಹಿಸಿ ತಮ್ಮ ಮಂತ್ರಿ ಮಂಡಲದ ಸಚಿವರಿಗೂ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಿ, ಅವರು ತಮ್ಮ ತಮ್ಮ ಇಲಾಖೆಗಳಲ್ಲಿ ಸಂಬಂಧಪಟ್ಟಂತೆ ಸಾಧ್ಯವಾದಷ್ಟು ಎರಡು ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News