ಹನೂರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಸವಾರ ಮೃತ್ಯು
Update: 2018-10-17 13:05 GMT
ಹನೂರು, ಅ.17: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಆಂದ್ರಪ್ರದೇಶದ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಂಬಿಕಾಪುರದ ಉಡುತೋರೆ ಹಳ್ಳದ ಸೇತುವೆಯ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಆಂದ್ರಪ್ರದೇಶ ಮೂಲದ ರಾಜು ಮೃತ ಯುವಕ. ಈತ ಕರ್ನಾಟಕದ ನಾನಾ ಭಾಗದಲ್ಲಿ ಬಿಎಸ್ಎನ್ಎಲ್ ಕೇಬಲ್ ಕಲೆಕ್ಷನ್ ಕೆಲಸ ಮಾಡುತ್ತಿದ್ದನು. ರಾತ್ರಿ ಹನೂರು ತಾಲೂಕಿನ ಅಂಬಿಕಾಪುರದ ಬಳಿ ಕೆಲಸ ಮುಗಿಸಿ ಬಳಿ ಬೈಕ್ನಲ್ಲಿ ತೆರಳುತ್ತಿದ್ದಾಗ ಉಡುತೋರೆ ಹಳ್ಳದ ಸೇತುವೆಯ ಬಳಿ ಅಯತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ರಾಮಾಪುರ ಠಾಣೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.