ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಹರಿಶೇಖರನ್ ಪದಗ್ರಹಣ

Update: 2018-10-17 14:03 GMT

ಬೆಂಗಳೂರು, ಅ.17: ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಪಿ.ಹರಿಶೇಖರನ್ ಬುಧವಾರ ಅಧಿಕಾರ ವಹಿಸಿಕೊಂಡರು.

ಬಳಿಕ ಸಂಚಾರ ವ್ಯವಸ್ಥೆಯನ್ನುದ್ದೇಶಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ಆದೇಶದಂತೆ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತನಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ ಎಂದು ಹೇಳಿದರು.

ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಂಚಾರ ಆಯುಕ್ತ ಸ್ಥಾನವೂ ದೊಡ್ಡ ಜವಾಬ್ದಾರಿಯಾಗಿದ್ದು, ಇದಕ್ಕೆ ತಕ್ಕಂತೆ ಒಳ್ಳೆ ಕೆಲಸ ಮಾಡುವ ಹೊಣೆ ನಮ್ಮ ಮೇಲಿದೆ ಎಂದು ತಿಳಿಸಿದರು.

ಈ ಹಿಂದೆ ಈ ಹುದ್ದೆಯಲ್ಲಿದ್ದ ಆರ್.ಹಿತೇಂದ್ರ ಅವರನ್ನು ಸರಕಾರ ವರ್ಗಾಯಿಸಿತ್ತು. ತೆರವಾದ ಸ್ಥಾನಕ್ಕೆ ಹರಿಶೇಖರನ್ ಅವರು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News