ಮೈಸೂರು: ಕತ್ತು ಹಿಸುಕಿ ಪತ್ನಿಯ ಕೊಲೆಗೈದ ಪತಿ

Update: 2018-10-17 14:54 GMT

ಮೈಸೂರು,ಅ.17: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೋರ್ವ ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಸುಶೀಲಮ್ಮ (24) ಎಂದು ಗುರುತಿಸಲಾಗಿದ್ದು, ಸುಶೀಲಮ್ಮನನ್ನು ಆಕೆಯ ಗಂಡ ಸಾಗರ್ ಕುಮಾರ್ ಎಂಬಾತ ಕೌಟುಂಬಿಕ ಕಲಹದಿಂದ ಮನನೊಂದು ಕತ್ತು ಹಿಸುಕಿ ಕೊಲೆಗೈದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News