ಮಂಡ್ಯ: ಅಯತಪ್ಪಿ ಬಿದ್ದು ಕಾರ್ಮಿಕ ಸಾವು

Update: 2018-10-17 18:20 GMT
  ಮೃತ ನಂದೀಶ್

ಮಂಡ್ಯ, ಅ.17: ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಡೆದಿದೆ.

ಮದ್ದೂರು ತಾಲೂಕು ಬೆಸಗರಹಳ್ಳಿ ಗ್ರಾಮದ ಪುಟ್ಟಸ್ವಾಮಿ ಅವರ ಪುತ್ರ ನಂದೀಶ್(40) ಮೃತಪಟ್ಟಿರುವ ಕಾರ್ಮಿಕನಾಗಿದ್ದು, ಈ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೆಜ್ಜಲಗ್ವರೆ ಕೈಗಾರಿಕಾ ಪ್ರದೇಶದ ಕ್ಲೀನ್ ಪ್ಯಾಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಂದೀಶ್, 20 ಅಡಿ ಎತ್ತರದಿಂದ ಅಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಹೇಳಲಾಗಿದೆ.

ಮೃತ ನಂದೀಶ್‍ಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು, ತಾಯಿ ಇದ್ದಾರೆ. ನಂದೀಶ್ ಕುಟುಂಬದ ರೋದನ ಮುಗಿಲುಮುಟ್ಟಿತ್ತು. ಬುಧವಾರ ಸಂಜೆ ಬೆಸಗರಹಳ್ಳಿಯಲ್ಲಿ ಅಂತ್ಯಸಂಸ್ಕಾರ ನೆರವೇರಿತು. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News