ಮದ್ದೂರು: ನವವಿವಾಹಿತೆ ಆತ್ಮಹತ್ಯೆಗೆ ಶರಣು

Update: 2018-10-17 18:27 GMT

ಮಂಡ್ಯ, ಅ.17: ಒಂದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಕೃಷ್ಣ ಎಂಬುವರ ಪತ್ನಿ ಶಿಲ್ಪ ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ರಾಮನಗರ ಜಿಲ್ಲೆಯವರಾದ ಶಿಲ್ಪ ಅವರ ವಿವಾಹ ಒಂದು ತಿಂಗಳ ಹಿಂದೆ ಮಣಿಗೆರೆ ಕೃಷ್ಣ ಅವರಿಗೆ ಮದುವೆ ಮಾಡಲಾಗಿತ್ತು. ಇನ್ನೂ 16 ವರ್ಷದವಳಾದ ಶಿಲ್ಪಳನ್ನು ಬಡತನದ ಹಿನ್ನೆಲೆಯಲ್ಲಿ ಮದುವೆ ವಯಸ್ಸಿಗೆ ಮುಂಚೆ ಮದುವೆ ಮಾಡಲಾಗಿದ್ದು, ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮದ್ದೂರು ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಕೆ ಕೈಗೊಂಡಿದ್ದಾರೆ. 
ಸ್ಥಳಕ್ಕೆ ಪೊಲೀಸರು ಸೇರಿದಂತೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪತಿ ಸೇರಿದಂತೆ ಆತನ ಮನೆಯವರು ತಲೆಮರೆಸಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೆ.ಎಂ.ದೊಡ್ಡಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News