ಅ.20: ತುಳು ಅಕಾಡಮಿ ಚಾವಡಿ ಸನ್ಮಾನ

Update: 2018-10-18 11:39 GMT

ಮಂಗಳೂರು, ಅ.18: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಅ.20ರ ಅಪರಾಹ್ನ 3:30ಕ್ಕೆ ಅಕಾಡಮಿಯ ಸಿರಿಚಾವಡಿಯಲ್ಲಿ ದೈವಾರಾಧನೆ ಕ್ಷೇತ್ರದಲ್ಲಿ ಹೆಸರಾದ ಕಾಂತ ಕಣಂತೂರು ಅವರನ್ನು ಸನ್ಮಾನಿಸಲಾಗುವುದು.

ಸಾಹಿತಿ ಪ್ರೊ.ಎ.ವಿ. ನಾವಡ ಮತ್ತು ಹಂಪಿ ಕನ್ನಡ ವಿವಿಯ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎ.ಶ್ರಿಧರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News