ಪಡುಬಿದ್ರೆ: ಕಾರು ಢಿಕ್ಕಿ; ಪಾದಚಾರಿ ಮೃತ್ಯು

Update: 2018-10-18 12:04 GMT

ಉಡುಪಿ, ಅ. 18: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. 

ಮೃತರನ್ನು ಮುಲ್ಕಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಪಡುಬಿದ್ರೆ ಪಂಚಾಯತ್ ಮಾಜಿ ಸದಸ್ಯ ರಾಮ ಕೆ. ಕುಂದರ್ (92) ಎಂದು ಗುರುತಿಸಲಾಗಿದೆ.

ರಾಮ ಕುಂದರ್ ಅವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News