ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿದೆ ಎನ್ನುವುದು ತಪ್ಪು: ಮಾಜಿ ಸಚಿವ ಎಂ.ಬಿ ಪಾಟೀಲ್

Update: 2018-10-18 15:07 GMT

ವಿಜಯಪುರ/ಬೆಂಗಳೂರು, ಅ.18: ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದಿಂದಾಗಿ ಕಾಂಗ್ರೆಸ್‍ಗೆ ಚುನಾವಣೆಯಲ್ಲಿ ಸೋಲಾಗಿದೆ ಎನ್ನುವುದು ತಪ್ಪು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

'ಪ್ರತ್ಯೇಕ ಧರ್ಮ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಇದಕ್ಕಾಗಿ ಸಮುದಾಯದ ಕ್ಷಮೆ ಕೇಳುತ್ತೇನೆ' ಎಂದು ನಿನ್ನೆ ಸಚಿವ ಡಿ.ಕೆ.ಶಿವಕುಮಾರ್ ಬಾಳೆಹೊನ್ನೂರಿನಲ್ಲಿ ಹೇಳಿಕೆ ನೀಡಿದ್ದರು. ಈ ಕುರಿತು ಗುರುವಾರ ನಗರದಲ್ಲಿ ಸುದ್ದಿಗಾರಿಗೆ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, 'ರಾಜಕಾರಣವೇ ಬೇರೆ, ಧರ್ಮವೇ ಬೇರೆ. ಲಿಂಗಾಯತ ಸಮುದಾಯದ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಯಿತು ಎಂಬುದು ಸರಿಯಲ್ಲ. ದಕ್ಷಿಣ ಕರ್ನಾಟಕ ಭಾಗದಲ್ಲಿ ಹೋರಾಟ ಹೆಚ್ಚು ಪರಿಣಾಮ ಬೀರಲಿಲ್ಲ. ಹಾಗಿದ್ದರೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಭಾಗದಲ್ಲಿ ಎಷ್ಟು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ ಎಂದು ಎಂ.ಬಿ.ಪಾಟೀಲ್ ಪ್ರಶ್ನೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News