ಮಂಡ್ಯ: ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು
Update: 2018-10-19 18:42 GMT
ಮಂಡ್ಯ, ಅ.19: ಆಯುಧ ಪೂಜೆ ಹಿನ್ನೆಲೆಯಲ್ಲಿ ಬೈಕ್ ತೊಳೆಯುವ ಸಂದರ್ಭ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಉಜ್ಜನಿಚೆನ್ನನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ರಮೇಶ್(40) ಮೃತ ವ್ಯಕ್ತಿಯಾಗಿದ್ದು, ಇವರು ಗುರುವಾರ ಮನೆ ಎದುರು ಅರ್ಧ ಎಚ್ಪಿ ವಾಟರ್ ಪಂಪ್ ಮೂಲಕ ಪ್ಲಾಸ್ಟಿಕ್ ಡ್ರಮ್ನಿಂದ ನೀರು ತೆಗೆದುಕೊಂಡು ಬೈಕ್ ತೊಳೆಯುವಾಗ ಈ ಘಟನೆ ಸಂಭವಿಸಿದೆ.
ಈ ಸಂದರ್ಭದಲ್ಲಿ ರಮೇಶ್ ಮೋಟಾರ್ ಪಂಪ್ ಸ್ಪರ್ಶ ಮಾಡಿದಾಗ ವಿದ್ಯುತ್ ಪ್ರವಹಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.