ಶಿವಮೊಗ್ಗ: ಪರವಾನಿಗೆಯಿಲ್ಲದೆ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಮರಳು ವಶ

Update: 2018-10-19 18:44 GMT

ಶಿವಮೊಗ್ಗ, ಅ.19: ಯಾವುದೇ ಪರವಾನಿಗೆಯಿಲ್ಲದೆ ತುಂಗಾಭದ್ರಾ ನದಿಯಿಂದ ಮರಳು ತೆಗೆದು ದಾಸ್ತಾನು ಮಾಡಿದ್ದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ವಶಕ್ಕೆ ಪಡೆದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದಲ್ಲಿ ನಡೆದಿದೆ. 

ತುಂಗಾಭದ್ರಾ ನದಿಯ ಎರಡು ಕಡೆಗಳಲ್ಲಿ ಮರಳು ದಾಸ್ತಾನು ಮಾಡಲಾಗಿತ್ತು. ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 30 ಟ್ರ್ಯಾಕ್ಟರ್ ಲೋಡ್‍ನಷ್ಟು ಮರಳು ವಶಕ್ಕ ಪಡೆಯಲಾಗಿದ್ದು, ಇದರ ಮೌಲ್ಯ 1.80 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News