ವಿಪತ್ತು ನಿರ್ವಹಣಾ ಪರಿಣಿತ ಹುದ್ದೆಗೆ ಅರ್ಜಿ ಆಹ್ವಾನ
Update: 2018-10-20 14:11 GMT
ಉಡುಪಿ, ಅ. 20: ಉಡುಪಿ ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತ ಒಂದು ಹುದ್ದೆಯ ನೇಮಕಾತಿಗೆ ವಿಪತ್ತು ನಿರ್ವಹಣೆಯಲ್ಲಿ ನೈಪುಣ್ಯತೆ ಹೊಂದಿದ ಅರ್ಹ ಅ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಜ್ಞಾನ, ಪರಿಸರ ವಿಜ್ಞಾನ, ಮೆನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಯುಜಿಸಿ ಮಾನ್ಯತೆ ಪಡೆದ ವಿವಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದ 3-5ವರ್ಷ ವಿಪತ್ತು ನಿರ್ವಹಣೆಯಲ್ಲಿ ಅನುಭವ ಹೊಂದಿದವರು ಅರ್ಜಿ ಸಲ್ಲಿಸ ಬಹುದಾಗಿದೆ.
ಮಾಸಿಕ 40,000 ರೂ. ಸಂಭಾವನೆ ನೀಡಲಾಗುವುದು. ನೇಮಕಾತಿಯ ಇತರೆ ವಿವರಗಳನ್ನು ಹಾಗೂ ಅರ್ಜಿ ನಮೂನೆಯನ್ನು ಕಚೇರಿಯ ವೆಬ್ಸೈಟ್ www.udupi.nic.in ಇಲ್ಲಿ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾದಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.