ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

Update: 2018-10-20 14:37 GMT

ಬೆಂಗಳೂರು, ಅ.20: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಕೊಲೆಗೈದಿರುವ ಘಟನೆ ಇಲ್ಲಿನ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಹೆಗ್ಗನಹಳ್ಳಿಯ ಸಂಜೀನಿ ನಗರದ ಖಾಲಿ ಜಾಗದ ಬಳಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಶ್ರೀನಿವಾಸ್ (40) ಎಂದು ಪೊಲೀಸರು ಗುರುತಿಸಿದ್ದಾರೆ. ಕೊಲೆಗೆ ಕಾರಣಗಳು ತಿಳಿದುಬಂದಿಲ್ಲ.

ಪ್ರಕರಣ ದಾಖಲಿಸಿರುವ ರಾಜಗೋಪಾಲನಗರ ಪೊಲೀಸರು, ಕೃತ್ಯವೆಸಗಿರುವ ಆರೋಪಿಗಳಿಗೆ ತೀವ್ರಶೋಧ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News