ಬೈಂದೂರು: ಹೊಂಡಕ್ಕೆ ಬಿದ್ದು ಬೈಕ್ ಸವಾರ ಮೃತ್ಯು

Update: 2018-10-20 16:06 GMT

ಬೈಂದೂರು, ಅ.20: ಗೋಳಿಹೊಳೆ ಗ್ರಾಮದ ಹಂಗಾರಗದ್ದೆ ಜಟ್ಟಿಗೇಶ್ವರ ದೇವಸ್ಥಾನದ ರಸ್ತೆ ಬದಿಯ ಹೊಂಡಕ್ಕೆ ಬೈಕ್ ಸಮೇತ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಅ.19ರಂದು ಮಧ್ಯರಾತ್ರಿ  ನಡೆದಿದೆ.

ಮೃತರನ್ನು ಜಗನ್ನಾಥ ಪೂಜಾರಿ ಎಂದು ಗುರುತಿಸಲಾಗಿದೆ.

ಇವರು ಬೈಕಿನಲ್ಲಿ ಹೋಗುತ್ತಿರುವಾಗ ಬೈಕ್ ಸ್ಕಿಡ್ ಆಗಿ ಹೊಂಡಕ್ಕೆ ಬಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಬೈಂದೂರು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News