ಮಡಿವಾಳ ಬಾಂಬ್ ಸ್ಫೋಟ ಪ್ರಕರಣ: ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು

Update: 2018-10-20 16:52 GMT

ಬೆಂಗಳೂರು, ಅ.20: 2008ನೇ ಸಾಲಿನಲ್ಲಿ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಸಲೀಂನನ್ನು ಸಿಸಿಬಿ ಪೊಲೀಸರು ಸ್ಫೋಟದ ಜಾಗಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ.

ನಗರದ ಮಡಿವಾಳ ಆಡುಗೋಡಿ ಹಾಗೂ ಈಗಲ್ ಸ್ಟ್ರೀಟ್ ಸೇರಿದಂತೆ ಮೈಸೂರು ರಸ್ತೆ ಬಳಿ ಮಹಜರು ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಕೇರಳಕ್ಕೆ ಕರೆದುಕೊಂಡು ಹೋಗಿ ಪಂಚನಾಮೆ ಮಾಡಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News