​ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ದೂರು

Update: 2018-10-20 17:01 GMT

ಮಂಗಳೂರು, ಅ.20: ನಗರದ ಬಜಾಲ್ ಕುಡ್ತಕ್ಕದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಜಾನ್ ಸುರೇಶ್ (40) ಎಂಬವರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಬಜಾಲ್ ನಿವಾಸಿ ಗುರುಪ್ರಸಾದ್ (35) ಹಲ್ಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

ಜಾನ್ ಸುರೇಶ್ ಶುಕ್ರವಾರ ದೇವಾಲಯದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವಕ್ಕೆ ಹೋಗಿ ಮರಳಿ ಬರುತ್ತಿದ್ದಾಗ ಗುರುಪ್ರಸಾದ್ ತಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೆ ಹಳೇ ದ್ವೇಷ ಕಾರಣ ಎಂದು ತಿಳಿದು ಬಂದಿದೆ.

ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News