‘ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿ’ ಪ್ರಕಟ: ಡಾ.ಜಯದೇವಿ, ಚ.ಹ.ರಘುನಾಥ ಆಯ್ಕೆ

Update: 2018-10-20 17:10 GMT

ಬೆಂಗಳೂರು, ಅ.20: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ‘ಶ್ರೀ ವಿಜಯ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಡಾ. ಜಯದೇವಿ ಗಾಯಕವಾಡ ಹಾಗೂ ಪತ್ರಕರ್ತ, ಸಾಹಿತಿ ಚ.ಹ. ರಘುನಾಥ ಮತ್ತು ‘ಶ್ರೀ ಟಿ. ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ-ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಪ್ರಗತಿಪರ ಚಿಂತಕಿ ಡಾ. ಸಮತಾ ಬಿ. ದೇಶಮಾನೆ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕ ಕೊಡುಗೆ ನೀಡಿದ 45 ವರ್ಷದೊಳಗಿನ ಸಾಹಿತಿಗಳಿಗೆ ರಾಜ್ಯಮಟ್ಟದಲ್ಲಿ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ಯನ್ನು ನೀಡಲಾಗುವುದು. ಈ ಪ್ರಶಸ್ತಿಯು ತಲಾ 60 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಅದೇ ರೀತಿ ಎಲೆಮರೆ ಕಾಯಿಯಂತೆ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ‘ಶ್ರೀ ಟಿ. ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ-ಸಾಹಿತ್ಯ ಪ್ರಶಸ್ತಿ’ಯು 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News