ತುಮಕೂರು: ವಾಹನ ಕಳವು ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

Update: 2018-10-20 18:02 GMT

ತುಮಕೂರು,ಅ.20: ಹುಲಿಯೂರು ದುರ್ಗದ ಏರೋಹಳ್ಳಿ ಗೇಟ್ ಬಳಿ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಹೆಚ್.ಎಸ್. ಶಿವಕುಮಾರಸ್ವಾಮಿ ಅವರ ಟಾಟಾ ಇಂಡಿಕಾ ಕಾರ್ ಅನ್ನು ಕಳವು ಮಾಡಿದ ಆರೋಪದ ಮೇಲೆ ಹೇಮಂತ್ ಎಂಬವನಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ.ಗಳ ದಂಡವನ್ನು ವಿಧಿಸಲಾಗಿದೆ. 

ಆರೋಪ ಸಾಬೀತಾಗಿರುವುದರಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ಅವರು ಈ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ತನಿಖಾಧಿಕಾರಿ ಬಾಳೇಗೌಡ ನಡೆಸಿ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕಿ ಕೆ.ಹೆಚ್.ಶ್ರೀಮತಿ ವಾದವನ್ನು ಮಂಡಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News