ಡಿಕೆಶಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವುದು ಬೇಡ: ಕೆ.ಸಿ ವೇಣುಗೋಪಾಲ್

Update: 2018-10-21 13:52 GMT

ಬಳ್ಳಾರಿ, ಅ.21: ಲಿಂಗಾಯತ ಸ್ವತಂತ್ರ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವುದು ಬೇಡ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಪಕ್ಷದ ಹಿರಿಯ ನಾಯಕ. ಅವರು ಏನೆ ಮಾಡಿದರೂ ಯೋಚನೆ ಮಾಡಿ ಮಾತನಾಡಿರುತ್ತಾರೆ. ಹೀಗಾಗಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವುದು ಬೇಡ ಎಂದರು.

ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಶಿವಕುಮಾರ್ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ನಾನು ಅವರನ್ನು ತರಾಟೆಗೆ ತೆಗೆದುಕೊಂಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ಶಿವಕುಮಾರ್ ತಮ್ಮ ಅನಿಸಿಕೆಯನ್ನು ಹೇಳಿದ್ದಾರೆ. ಅವರದ್ದು ಯಾವುದೇ ತಪ್ಪಿಲ್ಲ. ಸರಿಯಾಗಿಯೇ ಮಾತನಾಡಿದ್ದಾರೆ. ಆದರೆ, ಇದು ಪಕ್ಷದ ನಿಲುವಲ್ಲ, ಶಿವಕುಮಾರ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News