​ಅ. 22: ಉಚಿತ ಯೋಗ ಶಿಬಿರದ ಉದ್ಘಾಟನಾ ಸಮಾರಂಭ

Update: 2018-10-21 15:20 GMT

ಮಂಗಳೂರು, ಅ.21: ನಗರದ ಶಕ್ತಿ ವಸತಿ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶ್ರೀಗೋಪಾಲಕೃಷ್ಣ ದೇವಸ್ಥಾನದ ಸಹಯೋಗದೊಂದಿಗೆ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ಉಚಿತ ಯೋಗ ಶಿಬಿರದ ಉದ್ಘಾಟನೆ ಅ. 22ರಂದು ಸಂಜೆ 5:30ಕ್ಕೆ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಎಸ್‌ಡಿಎಂ ಸ್ನಾತಕೋತ್ತರ ಸಂಶೋಧನ ಕೇಂದ್ರದ ಸ್ಥಾಪಕ ನಿರ್ದೇಶಕ ಡಾ. ದೇವರಾಜ ನೆರವೇರಿಸಲಿದ್ದಾರೆ. ಮುಖ್ಯಅತಿಥಿಯಾಗಿ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ ಯು.ಕೆ. ಭಾಗವಹಿಸಲಿದ್ದಾರೆ. ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಯ್ಕಾ ಅಧ್ಯಕ್ಷತೆ ವಹಿಸುವರು.

ಯೋಗ ಶಿಬಿರವು ಅ. 22ರಿಂದ 31ರವರೆಗೆ ಶಕ್ತಿನಗರದ ಗೋಪಾಲಕೃಷ್ಣ ದೇವಸ್ಥಾನದ ಸುಮಾನಸ ಸಭಾಂಗಣಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ಕೃಷ್ಣಕುಮಾರ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ್ ಜಿ.ಎಸ್., ಅಭಿವೃದ್ಧಿ ಅಧಿಕಾರಿ ನಸೀಮಾಭಾನು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News