ಕಾಂಗ್ರೆಸ್ ಕಾರ್ಯಕರ್ತನ ಪ್ರಾಣಕ್ಕೆ ಕುತ್ತುತಂದ ಫೇಸ್‌ಬುಕ್ ಸಂದೇಶ

Update: 2018-10-22 09:32 GMT

ಮುಂಬೈ, ಅ.22: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಂದೇಶ ಹಾಕಿದ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿರುವ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಮನೋಜ್ ತಿವಾರಿ(45 ವರ್ಷ) ಮೃತ ಕಾಂಗ್ರೆಸ್ ಕಾರ್ಯಕರ್ತ. ತಿವಾರಿ ರಾತ್ರಿ ಸುಮಾರು 1:30ರ ಸುಮಾರಿಗೆ ಅಸಲ್ಫಾ ಮೆಟ್ರೋ ಸ್ಟೇಶನ್ ಹತ್ತಿರ ಎರಡರಿಂದ ಮೂವರು ಅಪರಿಚಿತ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಮನೋಜ್‌ರನ್ನು ಪೊಲೀಸರ ತಂಡ ಆಸ್ಪತ್ರೆಗೆ ಸೇರಿಸುವ ಮೊದಲೇ ಪ್ರಾಣಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದಕ್ಕೆ ಬಿಜೆಪಿ ಗೂಂಡಾಗಳು ಕಾಂಗ್ರೆಸ್‌ನ ಕಟ್ಟಾ ಕಾರ್ಯಕರ್ತ ಮನೋಜ್‌ರನ್ನು ಹತ್ಯೆ ಮಾಡಿದ್ದಾರೆ ಎಂಬ ಮಾಧ್ಯಮಗಳ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು,‘‘ಮನೋಜ್ ತಿವಾರಿ ಮೇಲೆ ದಾಳಿ ನಡೆಸಿ ಹತ್ಯೆಗೈಯಲು ನಿಜವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಹತ್ಯೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ'' ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News