ಕೊಲ್ಲೂರು : ಬಾವಿಗೆ ಬಿದ್ದು ಕೃಷಿಕ ಮೃತ್ಯು

Update: 2018-10-22 15:42 GMT

ಕೊಲ್ಲೂರು, ಅ.22: ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಆವರಣ ಇಲ್ಲದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅ.20ರಂದು ಅಪರಾಹ್ನ ವೇಳೆ ಮುದೂರು ಗ್ರಾಮದ ಉಂಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಮುದೂರು ಗ್ರಾಮದ ಉಂಡಿಯ ವಸಂತ(23) ಎಂದು ಗುರುತಿಸಲಾಗಿದೆ. ಇವರು ಮನೆ ಬಳಿ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಅಕಸ್ಮಿಕವಾಗಿ ಆವರಣ ಇಲ್ಲದ ಬಾವಿಗೆ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News