ಕೆಎಸ್ಸಾರ್ಟಿಸಿ ಚಾಲಕನ ಮೇಲೆ ಹಲ್ಲೆ: ಆರೋಪ

Update: 2018-10-22 16:38 GMT

ಬೆಂಗಳೂರು, ಅ.22: ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಆರೋಪ ಇಲ್ಲಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ವಿ.ರಾಮಚಂದ್ರ ಎಂಬುವರು ಹಲ್ಲೆಗೊಳಗಾದ ಚಾಲಕ ಎಂದು ತಿಳಿದುಬಂದಿದೆ.

ರವಿವಾರ ರಾತ್ರಿ ಮುಳಬಾಗಿಲು ತಾಲೂಕಿನ ಮಾರ್ಗವಾಗಿ ಬೆಂಗಳೂರಿಗೆ ಸಂಚಾರ ಮಾಡುವ ವೇಳೆ ಕೆ.ಆರ್.ಪುರಂ ಬಳಿಯ ಟಿಸಿ ಪಾಳ್ಯದ ಸಿಗ್ನಲ್ ಬಳಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಚಾಲಕ ರಾಮಚಂದ್ರ ತಲೆಗೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News