ಚಲನಚಿತ್ರ ಯಶಸ್ವಿಗೆ ಕೋಣ ಕಡಿದ ಪ್ರಕರಣ: ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Update: 2018-10-22 17:13 GMT

ಮಂಗಳೂರು, ಅ.22: ಕನ್ನಡ ಚಲನಚಿತ್ರವೊಂದರ ಯಶಸ್ಸಿಗಾಗಿ ಕೋಣವನ್ನು ಸಾರ್ವಜನಿಕವಾಗಿ ಕಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಗೆ ಜಯಪ್ರಕಾಶ್ ಎಕ್ಕೂರು ಎಂಬವರು ದೂರು ನೀಡಿದ್ದಾರೆ.

ಪ್ರಾಣಿಗಳನ್ನು ಈ ರೀತಿ ವಧೆ ಮಾಡುವುದು ಕಾನೂನು ಪ್ರಕಾರ ಅಪರಾಧ. ಕೂಡಲೇ ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News