ಕೇರಳ ಸರಕಾರ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯ :ಅ. 29ರಂದು ಉಪವಾಸ ಸತ್ಯಾಗ್ರಹ
Update: 2018-10-23 12:47 GMT
ಬಂಟ್ವಾಳ, ಅ. 23: ಶಬರಿಮಲೆಯ ಸಂಪ್ರದಾಯವನ್ನು ಈ ಹಿಂದಿನಂತೆ ಉಳಿಸಲು ಮತ್ತು ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಬಗ್ಗೆ ಕೇರಳ ಸರಕಾರ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಅಯ್ಯಪ್ಪ ಭಕ್ತ ವೃಂದ ಬಿಸಿರೋಡ್ ಇದರ ನೇತೃತ್ವದಲ್ಲಿ ಆ.29ರಂದು ಬೆಳಿಗ್ಗೆ 8ರಿಂದ ಸಂಜೆ 5ಗಂಟೆವರೆಗೆ ಉಪವಾಸ ಸತ್ಯಾಗ್ರಹ, ಭಜನೆ ಮತ್ತು ಸಭಾ ಕಾರ್ಯಕ್ರಮ ಬಿ.ಸಿ.ರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನದ ಬಳಿಯಲ್ಲಿ ನಡೆಯಲಿದೆ ಎಂದು ಅಯ್ಯಪ್ಪ ಭಕ್ತ ವೃಂದದ ತಾಲೂಕು ಅಧ್ಯಕ್ಷ ಬೋಜ ಸಾಲಿಯಾನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲ ಕ್ಷೇತ್ರದ ಮೋಹನದಾಸ ಸ್ವಾಮೀಜಿ, ಬಂಟ್ವಾಳ ಶಾಸ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಇನ್ನಿತರ ಪ್ರಮುಖ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.