ಬೆಂಗಳೂರು: ಉಪನ್ಯಾಸಕರು ನಿಂದಿಸಿದರೆಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಗಳು

Update: 2018-10-23 13:42 GMT

ಬೆಂಗಳೂರು, ಅ.23: ಉಪನ್ಯಾಸಕರು ನಿಂದಿಸಿದರು ಎಂಬ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳಿಬ್ಬರು ಕಟ್ಟಡದ 2ನೆ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಲಹಳ್ಳಿಯ ಸೈಂಟ್ ಕ್ಲಾರೆಟ್ ಕಾಲೇಜ್ ವಿದ್ಯಾರ್ಥಿಗಳಾದ ಸೆಯ್ಯದ್ ಶೋಯಬ್ ಮತ್ತು ಹರೀಶ್ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಮದ್ಯಪಾನ ಮಾಡಿದ್ದರೆನ್ನಲಾಗಿದ್ದು, ಈ ಬಗ್ಗೆ ತರಗತಿಯ ಶಿಕ್ಷಕರು ತರಗತಿಯಲ್ಲಿ ಅವರಿಬ್ಬರಿಗೆ ಬುದ್ಧಿವಾದ ಹೇಳಿ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಪ್ರಾಂಶುಪಾಲರು ವಿದ್ಯಾರ್ಥಿಗಳ ಪೋಷಕರನ್ನು ಕಾಲೇಜಿಗೆ ಕರೆಸಿ ಬುದ್ದಿಮಾತು ಹೇಳುವಂತೆ ಸೂಚಿಸಿದ್ದರು. ಪ್ರಾಂಶುಪಾಲರ ಕಚೇರಿಯಿಂದ ಹೊರಬಂದ ವಿದ್ಯಾರ್ಥಿಗಳು ಕಾಲೇಜಿನ ಕಾರಿಡಾರ್‌ನಲ್ಲಿ ತಮ್ಮ ಪೋಷಕರೊಂದಿಗೆ ಜಗಳ ತೆಗೆದು ಎರಡನೆ ಮಹಡಿಯಿಂದ ಕೆಳಗೆ ಹಾರಿದ್ದಾರೆ. ತಕ್ಷಣ ಅವರನ್ನು ಇತರ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News