ಲೋಕಸಭೆ ಚುನಾವಣೆಗೆ ಬಿಜೆಪಿ, ಶಿವಸೇನೆ ಜೊತೆಯಾಗಿ ಸ್ಪರ್ಧೆ: ದೇವೇಂದ್ರ ಫಡ್ನವೀಸ್

Update: 2018-10-23 14:23 GMT

ಹೊಸದಿಲ್ಲಿ, ಅ.23: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷ ಶಿವಸೇನೆ ಜೊತೆಯಾಗಿ ಸ್ಪರ್ಧಿಸಲಿದೆ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಕೇಂದ್ರ ಹಾಗು ಮಹಾರಾಷ್ಟ್ರದಲ್ಲಿ ಶಿವಸೇನೆಯು ಬಿಜೆಪಿ ನೇತೃತ್ವದ ಸರಕಾರದ ಭಾಗವಾಗಿದೆ. ಪ್ರತ್ಯೇಕವಾಗಿ ಸ್ಪರ್ಧಿಸುವ ಉದ್ದೇಶವಿದ್ದಿದ್ದರೆ ಬಿಜೆಪಿ ಮತ್ತು ಶೀವಸೇನೆ ಎರಡೂ ಸರಕಾರಗಳಲ್ಲಿ ಜೊತೆಯಾಗುತ್ತಿರಲಿಲ್ಲ” ಎಂದವರು ಹೇಳಿದರು.

ಮೋದಿ ಸರಕಾರ ಮತ್ತು ಬಿಜೆಪಿ ವಿರುದ್ಧ ಶಿವಸೇನೆ ಟೀಕೆಗಳನ್ನು ಮಾಡುತ್ತಿದೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, “ಇದೆಲ್ಲಾ ಸಣ್ಣಪುಟ್ಟ ವಿಷಯಗಳು. ಮೊನ್ನೆಯಷ್ಟೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹಿಂದುತ್ವದ ಬಗ್ಗೆ ಮಾತನಾಡಿದರು. ಬಿಜೆಪಿ ಹೊರತುಪಡಿಸಿ ಇನ್ಯಾವ ಪಕ್ಷ ಹಿಂದುತ್ವದ ಬಗ್ಗೆ ಮಾತನಾಡುತ್ತದೆ. ನಮ್ಮ ನಡುವೆ ಯಾವುದೇ ಮನಸ್ತಾಪವಿಲ್ಲ” ಎಂದು ಫಡ್ನವೀಸ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News