ರಫೇಲ್ ಡೀಲ್ ಬಗ್ಗೆ ಎಫ್ ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಸಿನ್ಹಾ, ಶೌರಿ, ಭೂಷಣ್

Update: 2018-10-24 15:33 GMT

ಹೊಸದಿಲ್ಲಿ, ಅ.24: ರಫೇಲ್ ಫೈಟರ್ ಜೆಟ್ ಡೀಲ್ ನಲ್ಲಿ ‘ಕ್ರಿಮಿನಲ್ ದುರುಪಯೋಗ’ ನಡೆದಿದೆ ಎಂದು ಆರೋಪಿಸಿ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್ ಐಆರ್ ದಾಖಲಿಸುವಂತೆ ಕೋರಿ ಮಾಜಿ ಕೇಂದ್ರ ಸಚಿವರಾದ ಯಶ್ವಂತ್ ಸಿನ್ಹಾ ಮತ್ತು ಅರುಣ್ ಶೌರಿ ಹಾಗು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಐ ನಿರ್ದೇಶಕ ಅಲೋಕ್ ವರ್ಮಾರನ್ನು ಸರಕಾರ ರಜೆಯಲ್ಲಿ ಮನೆಗೆ ಕಳುಹಿಸಿದ ನಂತರ ಈ ಘಟನೆ ನಡೆದಿದೆ. ರಫೇಲ್ ಡೀಲ್ ಗೆ ಸಂಬಂಧಿಸಿ ದಾಖಲೆಗಳನ್ನು ಸಂಗ್ರಹಿಸಿದ್ದಕ್ಕಾಗಿ ಅಲೋಕ್ ವರ್ಮಾರಿಗೆ ಈ ಶಿಕ್ಷೆ ನೀಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News