ಮಂಡ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ

Update: 2018-10-24 18:13 GMT

ಮಂಡ್ಯ, ಅ.24: ಜಿಲ್ಲೆಯಲ್ಲಿ ಸಾಲಬಾಧೆಯಿಂದ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಬುಧವಾರ ಮದ್ದೂರು ತಾಲೂಕಿನ  ವಳಗೆರೆಹಳ್ಳಿಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೇಶ್ ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಒಂದೂವರೆ ಎಕರೆ ಜಮೀನಿನಲ್ಲಿ ಭತ್ತ, ಕಬ್ಬು ಬೆಳೆದಿದ್ದು, ಸಕಾಲಕ್ಕೆ ಮಳೆಯಾಗದೆ ಫಸಲು ನಾಶವಾಗಿತ್ತು ಎನ್ನಲಾಗಿದೆ.

ರಮೇಶ್ ಅವರು ಕೃಷಿ ಚಟುವಟಿಕೆಗಾಗಿ ಖಾಸಗಿಯವರು ಸೇರಿದಂತೆ ವಿವಿಧ ಬ್ಯಾಂಕ್‍ಗಳಿಂದ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದು, ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.

ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News