ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 8 ಫಲಾನುಭವಿಗಳಿಗೆ ಚೆಕ್ ವಿತರಣೆ

Update: 2018-10-27 10:50 GMT

ಭಟ್ಕಳ, ಅ.27: ಎಂಟು ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾಗಿರುವ ಪರಿಹಾರದ ಚೆಕ್ಕನ್ನು ಶಾಸಕ ಸುನೀಲ್ ನಾಯ್ಕ ಇಲ್ಲಿನ ತಾಪಂ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಚೆಕ್ ವಿತರಿಸಿ ಮಾತನಾಡಿದ ಶಾಸಕರು, ತನ್ನ ನಾಲ್ಕು ತಿಂಗಳ ಅವಧಿಯಲ್ಲಿ ಇಲ್ಲಿಯ ತನಕ 8 ಲಕ್ಷ ರೂ.ಗೂ ಅಧಿಕ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ವಿತರಿಸಿದ್ದು, ಬಡವರಿಗೆ ಇದರಿಂದ ಸಹಾಯಕವಾಗಿದೆ. ಮುಖ್ಯಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿ ಇಲ್ಲಿನ ಜನರ ಸಂಕಷ್ಟಗಳನ್ನು ತಿಳಿಸಿ ಅತೀ ಹೆಚ್ಚು ಹಣವನ್ನು ಮಂಜೂರು ಮಾಡಿಸಲು ಶ್ರಮಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಕೃಷ್ಣಾ ನಾಯ್ಕ ಆಸರಕೇರಿ, ಸಿ.ಎಸ್.ನಾಯ್ಕ ಮಂಕಿ, ದೀನೇಶ ನಾಯ್ಕ, ಸುರೇಶ ನಾಯ್ಕ, ಸುಬ್ರಾಯ ದೇವಾಡಿಗ, ಸುಬ್ರಾಯ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News