ಕೊಳ್ಳೇಗಾಲ : ರಸ್ತೆ ಅಪಘಾತಕ್ಕೆ ಓರ್ವ ಬಲಿ

Update: 2018-10-27 13:15 GMT

ಕೊಳ್ಳೇಗಾಲ, ಅ.27:ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಆಟೋ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಮುಡಿಗುಂಡ ಬಳಿ ಜರುಗಿದೆ.

ತಾಲ್ಲೂಕಿನ  ಕುಣಗಳ್ಳಿ ಗ್ರಾಮದ ವೆಂಕಟಶೆಟ್ಟಿ (65) ಮೃತ ವ್ಯಕ್ತಿ. ಮಧು ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಟ್ಟಣದಿಂದ ಕುಣಗಳ್ಳಿ ಗ್ರಾಮಕ್ಕೆ ಆಟೋದಲ್ಲಿ ಸುಮಾರು 8 ಮಂದಿ ಪ್ರಯಾಣಿಕರು ಹೋಗುತ್ತಿರುವಾಗ ಮುಡಿಗುಂಡದ ಬಳಿ ಎದುರುಗಡೆ ಬಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಪ್ರಯಾಣಿಕ ವೆಂಕಟಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . 

ಆಟೋ ಮತ್ತು ಬೈಕ್ ಚಾಲಕ ಸ್ಥಳದಲ್ಲೇ ಪರಾರಿಯಾಗಿದ್ದಾರೆ. ಬೈಕ್ ಹಿಂಬದಿ ಸವಾರ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಎಸ್‍ಐ ವೀಣಾನಾಯಕ್ ಭೇಟಿ ನೀಡಿ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News