ಉತ್ತರ ಪ್ರದೇಶ: ಜಾನುವಾರು ವ್ಯಾಪಾರಿಯ ಗುಂಡಿಕ್ಕಿ ಹತ್ಯೆ
Update: 2018-10-27 15:49 GMT
ಮುಝಫ್ಫರ್ ನಗರ, ಅ.27: ಜಾನುವಾರು ವ್ಯಾಪಾರಿಯೊಬ್ಬನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಮುಝಫ್ಫರ್ ನಗರದ ಸಿಖೇದಾ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಹತ್ಯೆಯಾದ ವ್ಯಕ್ತಿಯಿಂದ 1.50 ಲಕ್ಷ ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ಅಖ್ಲಾಕ್ ಎಂದು ಗುರುತಿಸಲಾಗಿದೆ. ಗ್ರಾಮವೊಂದರಲ್ಲಿ ನಡೆದ ಜಾನುವಾರು ಮೇಳದಲ್ಲಿ ಪಾಲ್ಗೊಂಡು ಅವರು ಮನ್ಸೂರ್ ಪುರ ಗ್ರಾಮದಲ್ಲಿರುವ ತನ್ನ ಮನೆಗೆ ಹಿಂದಿರುಗುತ್ತಿದ್ದರು. ಈ ಸಂದರ್ಭ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಅಖ್ಲಾಕ್ ರ ರಿಕ್ಷಾವನ್ನು ತಡೆದ ಇಬ್ಬರು ದುಷ್ಕರ್ಮಿಗಳು ಅವರಿಗೆ ಗುಂಡಿಕ್ಕಿ 1.50 ಲಕ್ಷ ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ಲಭಿಸಿದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.