ಬಿಹಾರ: ಶಿಕ್ಷಕನ ಗುಂಡಿಕ್ಕಿ ಹತ್ಯೆ

Update: 2018-10-28 18:33 GMT

ಪಾಟ್ನ, ಅ.28: ಮುಂಜಾನೆ ವಾಯುವಿಹಾರಕ್ಕೆ ಹೊರಟಿದ್ದ ಕಾಲೇಜು ಉಪನ್ಯಾಸಕರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬಿಹಾರದ ಶರೀಫ್ ಎಂಬಲ್ಲಿ ನಡೆದಿದೆ.

  ಶರೀಫ್ ಎಂಬ ಗ್ರಾಮದ ಪೈರು ಮಹತೊ ಸೊಮಾರಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ 58ರ ಹರೆಯದ ಅರವಿಂದ್ ಕುಮಾರ್ ಎಂಬವರು ವಾಯುವಿಹಾರಕ್ಕೆ ಹೊರಟಿದ್ದಾಗ ಮಿಲ್ಕಿಪಾರ್ ಎಂಬಲ್ಲಿ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪಾಟ್ನಾ ಸೆಂಟ್ರಲ್ ರೇಂಜ್ ಡಿಐಜಿ ರಾಜೇಶ್ ಕುಮಾರ್ ತಿಳಿಸಿದ್ದಾರೆ. ತೀವ್ರ ಗಾಯಗೊಂಡ ಅರವಿಂದ್‌ರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಭೂವಿವಾದದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿದೆ. ವಿಶೇಷ ತನಿಖಾ ತಂಡ ತನಿಖೆ ನಡೆಸಲಿದೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News