ಬರ ಪರಿಹಾರ: 2,434 ಕೋಟಿ ರೂ. ನೆರವು ಕೋರಿ ಕೇಂದ್ರಕ್ಕೆ ಪತ್ರ

Update: 2018-10-29 15:22 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 29: ರಾಜ್ಯದಲ್ಲಿನ ಒಟ್ಟು 100 ತಾಲೂಕುಗಳು ಬರ ಪೀಡಿತ ಎಂದು ಈಗಾಗಲೇ ಘೋಷಿಸಿದ್ದು, ಪರಿಹಾರ ಕಾರ್ಯಗಳಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ 2,434 ಕೋಟಿ ರೂ.ನೆರವು ಕೋರಿ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಪತ್ರ ಬರೆದಿದೆ.

ಕರ್ನಾಟಕ ರಾಜ್ಯದ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಕೂಡಲೇ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಕೋರಿ ರಾಜ್ಯ ಸರಕಾರವು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರಿಗೆ ಬರೆದ ಬರೆಯಲಾಗಿದೆ.

ರಾಜ್ಯದಲ್ಲಿ ತೀವ್ರ ಸ್ವರೂಪದ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬರ ಪೀಡಿತ ತಾಲೂಕುಗಳಲ್ಲಿ ಸರಕಾರದ ಪ್ರಾಥಮಿಕ ಅಂದಾಜಿನ ಪ್ರಕಾರ ಒಟ್ಟು 16,662 ಕೋಟಿ ರೂ.ಗಳಷ್ಟು ನಷ್ಟ ಸಂಭವಿಸಿದೆ ಎಂದು ರಾಜ್ಯ ಸರಕಾರ, ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News