ಬೈಲಕೆರೆ: ಮನೆಗೆ ನುಗ್ಗಿ ಚಿನ್ನಾಭರಣ ಕಳವು
Update: 2018-10-29 23:16 IST
ಉಡುಪಿ, ಅ.29: ನಗರದ ಬೈಲಕೆರೆ ವಿದ್ಯೋದಯ ಕಾಲೇಜಿನ ಹಿಂಭಾಗ ದಲ್ಲಿರುವ ಬಾಡಿಗೆ ಮನೆಯೊಂದಕ್ಕೆ ಅ.27ರ ಸಂಜೆಯಿಂದ ಅ.29ರ ಬೆಳಗಿನ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣ ಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಸುರೇಂದ್ರ ಆರ್.ಆಚಾರ್ಯ (41) ಎಂಬವರು ತನ್ನ ಮನೆಗೆ ಬೀಗ ಹಾಕಿ ಹೆಂಡತಿ ಹಾಗೂ ಮಗುವಿನೊಂದಿಗೆ ತಂದೆಯ ಮನೆಯಾದ ಪಾಂಗಾಳಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ ಸುಮಾರು 1,83,600 ರೂ. ಮೌಲ್ಯದ ಒಟ್ಟು 68 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.