ಬಿಲ್ಲವ ಸವಾಜದ ಮುಖಂಡ ಸೂರು ಸಿ.ಕರ್ಕೇರ ನಿಧನ

Update: 2018-10-31 14:18 GMT

ಮುಂಬೈ, ಅ.31:ಬಿಲ್ಲವ ಸಮುದಾಯದ ಹಿರಿಯ ಮುಂದಾಳು, ಮುಂಬೈಯ ಭಾರತ್ ಬ್ಯಾಂಕ್ ಕೋ ಅಪರೇಟಿವ್‌ನ ಲಿಮಿಟೆಡ್‌ನ ಮಾಜಿ ಕಾರ್ಯಾಧ್ಯಕ್ಷ, ಮುಂಬೈಯ ಹಿರಿಯ ಹೊಟೇಲ್ ಉದ್ಯಮಿ ಸೂರು ಸಿ.ಕರ್ಕೇರ (75) ಬುದವಾರ ಸಂಜೆ ಚರ್ನಿರೋಡ್‌ನಲ್ಲಿರುವ ಸಾಫಿ ಅಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ ಜಿಲ್ಲೆಯ ಉಚ್ಚಿಲ ಮೂಲದವರಾಗಿದ್ದ ಸೂರು ಕರ್ಕೇರ ಮುಂಬೈಯ ಮಹೇಶ್ ಲಂಚ್ ಹೋಮ್ ಹೋಟೆಲ್ ಸಮೂಹದ ಕಾರ್ಯಾಧ್ಯಕ್ಷರಾಗಿದ್ದು ನೂರಾರು ಸಂಘ ಸಂಸ್ಥೆಗಳಿಗೆ ಪೋಷಕರಾಗಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಓರ್ವ ಸಾಮಾಜಿಕ ಚಿಂತಕರಾಗಿದ್ದು, ಧಾರ್ಮಿಕ ಸೇವೆಗಳಲ್ಲೂ ಮುಂಚೂಣಿ ಯಲ್ಲಿದ್ದರು. ಉಚ್ಚಿಲದಲ್ಲಿ ಒಂದು ಸಭಾಗೃಹವನ್ನು ನಿರ್ಮಿಸಿದ್ದರು. ನೂರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡಿದ್ದ ಕರ್ಕೇರ, ಸಾಮಾಜಿಕ ಕಳಕಳಿ ಹೊಂದಿದ್ದರು.

ಮೃತರು ಪತ್ನಿ ಭಾರತ್ ಬ್ಯಾಂಕ್‌ನ ನಿರ್ದೇಶಕಿ ಶಾರದಾ ಎಸ್. ಕರ್ಕೇರ, ಪುತ್ರ ಬಿಸಿಸಿಐ ನಿರ್ದೇಶಕ ಮಹೇಶ್ ಎಸ್.ಕರ್ಕೇರ ಹಾಗೂ ಓರ್ವ ಪುತ್ರಿ/ಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ  ನ.1ರಂದು ಬೆಳಗ್ಗೆ 10:30ಕ್ಕೆ ಮರೀನ್‌ಲೈನ್ಸ್‌ನ ಚಂದನವಾಡಿ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸೂರು ಸಿ.ಕರ್ಕೇರ ನಿಧನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ, ನಿಕಟ ಪೂರ್ವಾಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಭಾರತ್ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ವಾಸುದೇವ ಆರ್.ಕೋಟ್ಯಾನ್, ಉಪ ಕಾರ್ಯಾಧ್ಯಕ್ಷೆ ನ್ಯಾ. ರೋಹಿಣಿ ಜೆ.ಸಾಲಿಯಾನ್, ಆಡಳಿತ ನಿರ್ದೇಶಕ ಸಿ.ಆರ್.ಮೂಲ್ಕಿ, ಬಿಸಿಸಿಐ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ, ಬಿಲ್ಲವ ದುರೀಣರಾದ ಎಲ್.ವಿ ಅಮೀನ್, ಕೆ. ಭೋಜರಾಜ್, ಗಂಗಾಧರ್ ಪೂಜಾರಿ ನಾಸಿಕ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಮುಖಂಡರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News