ಕನ್ನಡ ರಾಜ್ಯೋತ್ಸವ : ನಾಡಿನ ಜನತೆಗೆ ಸಿಎಂ ಶುಭಾಶಯ

Update: 2018-11-01 12:50 GMT

ಬೆಂಗಳೂರು, ನ. 1: ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 63ನೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿ ಹೊಂದಿರುವ ನಾಡು ನಮ್ಮದು. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ, ಶಾಂತಿ, ಸಹಬಾಳ್ವೆ, ಸೌಹಾರ್ದದಿಂದ ನಳನಳಿಸುವ ನಾಡು ಇದು ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ನಮ್ಮ ನಡೆ, ನುಡಿ, ವ್ಯವಹಾರ-ಎಲ್ಲದರಲ್ಲೂ ಕನ್ನಡತನ ಮರೆಯಲಿ. ಏಕೀಕರಣಕ್ಕಾಗಿ ದುಡಿದವರನ್ನು ಸ್ಮರಿಸೋಣ. ಸಮೃದ್ಧ ಕರ್ನಾಟಕವನ್ನು ಕಟ್ಟೋಣ. ತಾಯಿ ಭುವನೇಶ್ವರಿಯ ಕೃಪೆ ಸದಾ ನಮ್ಮೆಲ್ಲರ ಮೇಲಿರಲಿ ಎಂದು ಕುಮಾರಸ್ವಾಮಿ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News