ಕಾಂಗ್ರೆಸ್ ಆಮಿಷಕ್ಕೆ ಬಲಿಯಾದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಒಬ್ಬ ದ್ರೋಹಿ : ಕೇಂದ್ರ ಸಚಿವ ಸದಾನಂದಗೌಡ

Update: 2018-11-01 14:01 GMT

ಬೆಂಗಳೂರು, ನ. 1: ರಾಮನಗರ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಒಬ್ಬ ದ್ರೋಹಿ. ರಾಜಕೀಯದಲ್ಲಿ ಇನ್ನವರು ಯಾವುದೇ ಕಾರಣಕ್ಕೂ ಮುಂದೆ ಬರಲು ಸಾಧ್ಯವಿಲ್ಲ. ಆಮಿಷಕ್ಕೆ ಬಲಿಯಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟೀಕಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಿದ್ಧಾಂತ, ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯವನ್ನು ಒಪ್ಪಿ, ಪಕ್ಷಕ್ಕೆ ಬಂದವರು ಇದೀಗ ಏಕಾಏಕಿ ಪಕ್ಷ ತೊರೆದಿದ್ದಾರೆ. ಇದು ನನಗೆ ತುಂಬಾ ನೋವಾಗಿದೆ. ನಿಜಕ್ಕೂ ಬೇಸರ ಮೂಡಿಸಿದೆ ಎಂದು ಹೇಳಿದರು.

ರಾಮನಗರದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿ ಬಂದಿದ್ದೆ. ನಾಲ್ಕು ದಿನ ಅವರ ಪರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದೆ. ಬಿಜೆಪಿ ಶಾಸಕರು, ನೂರಾರು ಜನ ಕಾರ್ಯಕರ್ತರು ಅವರ ಪರ ಕೆಲಸ ಮಾಡುತ್ತಿದ್ದರು. ಬಿಜೆಪಿ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ ಎಂದು ಡಿವಿಎಸ್ ಹೇಳಿದರು.

ಆತ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ, ಅವರಲ್ಲಿದ್ದ ಕಾಂಗ್ರೆಸ್ ಬುದ್ಧಿ ಅವರನ್ನು ಬಿಟ್ಟು ಹೋಗಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ಬುದ್ಧಿ ತೋರಿಸಿ, ಕೊನೆಯ ಕ್ಷಣದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಅವರನ್ನ ದೇವರು ಮತ್ತು ಕ್ಷೇತ್ರದ ಜನರೂ ಕ್ಷಮಿಸೋದಿಲ್ಲ ಎಂದು ಅವರು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News