ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Update: 2018-11-01 14:04 GMT

ಸುಳ್ಯ, ನ. 1: ಕಳೆದ ಎರಡು ದಶಕಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿ ಟಿ.ಎಂ. ಶಹೀದ್‍ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ 2018-19ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ತೆಕ್ಕಿಲ್ ಪ್ರತಿಷ್ಠಾನವು ಸಮುದಾಯ ಭವನ, ಶಿಕ್ಷಣ ಸಂಸ್ಥೆ ಇನ್ನಿತರ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜ ಸೇವೆಯಲ್ಲಿ ತೊಡೆಗಿಸಿಕೊಂಡಿರುತ್ತದೆ.

ಇತ್ತೀಚೆಗೆ ಜೋಡುಪಾಲದಲ್ಲಿ ಸಂಭವಿಸಿದ ಭೀಕರ ಪ್ರಾಕೃತಿಕ ವಿಕೋಪದ ಸಂದರ್ಭ ವಿಶೇಷ ಮುತುವರ್ಜಿಯಿಂದ ನಿರಾಶ್ರಿತರಿಗೆ ಸಕಲ ವ್ಯವಸ್ಥೆಯನ್ನು ಕಲ್ಪಿಸಿರುವ ಈ ಸಂಸ್ಥೆಯು ರಾಜ್ಯಾದ್ಯಂತ ಎಲ್ಲರ ಗಮನ ಸೆಳೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News