ಸಿಬಿಐ ಮೇಲೆ ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Update: 2018-11-02 12:08 GMT
ಮಂಗಳೂರು, ನ.2: ಸಿಬಿಐ ಮೇಲೆ ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿಂದು ನಗರದಲ್ಲಿರುವ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕೇಂದ್ರ ಸರಕಾರವು ಸಿಬಿಐ ಮೇಲೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಇಂದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಫ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಜೋಜ, ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ಸುರೇಶ್ ಬಲ್ಲಾಳ್, ಇಬ್ರಾಹೀಂ ಕೋಡಿಜಾಲ್, ವಿಶ್ವಾಸ್ ಕುಮಾರ್ ದಾಸ್, ಮರಿಯಮ್ಮ ಥೋಮಸ್, ವಿನಯರಾಜ್, ಮುಹಮ್ಮದ್ ಮೋನು, ಪದ್ಮನಾಭ ನರಿಂಗಾನ, ಮಹಾಬಲ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.