ಕಾರು ಢಿಕ್ಕಿ, ಪಾದಾಚಾರಿ ಮೃತ್ಯು

Update: 2018-11-02 16:56 GMT

ಕೋಟ, ನ.2: ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಕಾರೊಂದು ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ತೀವ್ರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತೆಕ್ಕಟ್ಟೆಯಿಂದ ವರದಿಯಾಗಿದೆ.

ಮೃತರನ್ನು ಸ್ಥಳೀಯರಾದ ಸುಬ್ರಾಯ ಶಾನುಬೋಗ (60) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ 11:05ರ ಸುಮಾರಿಗೆ ಉಡುಪಿ- ಕುಂದಾಪುರದ ಏಕಮುಖ ಸಂಚಾರದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲೆಂದು ನಿಂತಿದ್ದಾಗ ವೇಗವಾಗಿ ಧಾವಿಸಿ ಬಂದ ಸ್ವಿ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿತ್ತು.

ಇದರಿಂದ ಸುಬ್ರಾಯ ಶಾನುಭೋಗ ರಸ್ತೆಗೆ ಬಿದ್ದಿದ್ದು ತಲೆಗೆ, ಸೊಂಟದ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿತ್ತು. ಕೂಡಲೇ ಗಾಯಾಳುವನ್ನು ಅಂಬ್ಯುಲೆನ್ಸ್‌ನಲ್ಲಿ ಕೋಟೇಶ್ವರದ ಎನ್ ಆರ್ ಆಚಾರ್ಯ ಆಸ್ಪತ್ರೆಗೆ ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆಗೆ ಸ್ಪಂದಿಸದೇ 12:05ಕ್ಕೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News