ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕರ ವಿರುದ್ಧ ಪ್ರಕರಣ

Update: 2018-11-03 16:43 GMT

ಹೆಬ್ರಿ, ನ.3: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯೊಂದರ ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಶಿಕ್ಷಕರು ಹಾಗೂ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದ ಶಾಲಾ ಪ್ರಾಂಶು ಪಾಲ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಸೆ.14ರಂದು ಶಾಲಾ ಶಿಕ್ಷಕರಾದ ಮಂಜುನಾಥ್ ಹಾಗೂ ಸುಧೀಂದ್ರ ಎಂಬ ವರು ಎಸೆಸೆಲ್ಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಶಿಕ್ಷಕರ ವಿರುದ್ಧ ಕ್ರಮ ಜರಗಿಸುವಂತೆ ಪೋಷಕರು ಶಾಲಾ ಪ್ರಾಂಶುಪಾಲ ರಾಮಕೃಷ್ಣ ಹೆಗ್ಡೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನರಿಗೆ ದೂರು ನೀಡಿದ್ದರು. ಈ ಬಗ್ಗೆ ಆರೋಪಿ ಶಿಕ್ಷಕರ ವಿರುದ್ಧ ಮೇಲಾಧಿಕಾರಿಗಳು ಯಾವುದೇ ಕ್ರಮ ಜರಗಿಸದ ಹಿನ್ನೆಲೆಯಲ್ಲಿ ನ.1ರಂದು ಪೋಷಕರು ನಾಲ್ವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳೆಲ್ಲರು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಕಾರ್ಕಳ ಪ್ರಭಾರ ಡಿವೈಎಸ್ಪಿ ಬೆಳ್ಳಿಯಪ್ಪ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News