×
Ad

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು

Update: 2018-11-04 20:54 IST

ಬೆಳ್ತಂಗಡಿ, ನ. 4: ಲಾಯಿಲ ಗ್ರಾಮದ ಕನ್ನಾಜೆ ಎಂಬಲ್ಲಿ ರವಿವಾರ ಸಂಜೆ ಸ್ನಾನಕ್ಕೆಂದು ನದಿಗಿಳಿದಿದ್ದ ಯುವಕನೋರ್ವ ನೀರು ಪಾಲಾದ ಘಟನೆ ನಡೆದಿದೆ.

ಮೃತ ಯುವಕನ್ನು ಸ್ಥಳೀಯ ನಿವಾಸಿ ಸ್ಟೀವನ್ ರೋಡ್ರಿಗಸ್ (24) ಎಂದು ಗುರುತಿಸಲಾಗಿದೆ.

ರವಿವಾರ ಅಪರಾಹ್ನ ಗೆಳೆಯರೊಂದಿಗೆ  ಸ್ನಾನಕ್ಕೆಂದು ನದಿಗೆ ಹೋಗಿದ್ದ ಈತ ಕಾಲುಜಾರಿ ನೀರಿಗೆ ಬಿದ್ದಿದ್ದು, ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದಿದ್ದು, ಮುಳುಗು ತಜ್ಞ ಇಸ್ಮಾಯಿಲ್ ನದಿಯಿಂದ ಮೃತದೇಹವನ್ನು ಮೇಲೆತ್ತಿದರು ಎಂದು ಮಾಹಿತಿ ದೊರಕಿದೆ.

ಬೆಳ್ತಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News