ಓಮ್ನಿ ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-11-04 16:15 GMT
ಗಣೇಶ

ಕುಂದಾಪುರ, ನ.4: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಮಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೀಜಾಡಿ ಗ್ರಾಮದ ಪೂಜಾ ಟೈಲ್ಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.3ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಬೀಜಾಡಿ ಗ್ರಾಮದ ದೋಡೊಣಿ ನಿವಾಸಿ ಗಣೇಶ ಆಚಾರ್ (48) ಎಂದು ಗುರುತಿಸಲಾಗಿದೆ. ಸಹಸವಾರ ದೊಡ್ಮನೆಬೆಟ್ಟು ನಿವಾಸಿ ಶೇಖರ ದೇವಾಡಿಗ(49) ಎಂಬವರು ತೀವ್ರವಾಗಿ ಗಾಯಗೊಂಡು ಕೋಟೇಶ್ವರ ಖಾಸಗಿ ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಟ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರು ರಸ್ತೆ ಕ್ರಾಸ್ ಮಾಡಲು ನಿಂತಿದ್ದ ಗಣೇಶ್ ಆಚಾರ್‌ರ ಬೈಕಿಗೆ ಢಿಕ್ಕಿ ಹೊಡೆ ಯಿತು. ಇದರ ಪರಿಣಾಮ ಸವಾರರಿಬ್ಬರು ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಗಣೇಶ್ ಆಚಾರ್ ಚಿಕಿತ್ಸೆ ಫಲಕಾರಿ ಯಾಗದೆ ಇಂದು ಬೆಳಗ್ಗೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.

ಕೋಟೇಶ್ವರದ ರಥಬೀದಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಗಣೇಶ್ ಆಚಾರ್, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News