ಶ್ರೀನಿವಾಸ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ

Update: 2018-11-04 16:42 GMT

ಮಂಗಳೂರು, ನ.4: ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ವತಿಯಿಂದ ಮೂಡುಶೆಡ್ಡೆ ಗ್ರಾಪಂ ಹಾಗೂ ಮೂಡುಶೆಡ್ಡೆಯ ಜಿಪಂ ಸರಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ಮೂಡುಶೆಡ್ಡೆಯ ಸರಕಾರಿ ಸಂಯುಕ್ತ ಪ್ರೌಢಶಾಲೆ ಶಾಲಾ ಮಕ್ಕಳಿಗೆ ಮತ್ತು ಪೋಷಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ರವಿವಾರ ಹಮ್ಮಿಕೊಳ್ಳಲಾಗಿತ್ತು.

 ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಮೂಡುಶೆಡ್ಡೆ ಗ್ರಾಪಂ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಆರ್ಥಿಕವಾಗಿ ಹಿಂದುಳಿದಿರುವ ಜನರು ಹೆಚ್ಚಿರುವ ಮೂಡುಶೆಡ್ಡೆ ಪರಿಸರದಲ್ಲಿ ಇಂತಹ ಶಿಬಿರ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಪರಿಸರದ ಜನತೆ ಶಿಬಿರದ ಪ್ರಯೋಜನ ಪಡೆದುಕೊಂಡು ಆರೋಗ್ಯ ಜಾಗೃತಿಯನ್ನು ಬೆಳೆಸಿಕೊಳ್ಳಬೇಕೆಂದರು.

ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಮುಖ್ಯೋಪಾಧ್ಯಾಯ ಸುಬ್ರಾಯ ಪೈ ಮಾತನಾಡಿ, ಜನರಲ್ಲಿ ಹಣ ಇಲ್ಲದಿದ್ದರೂ ಆರೋಗ್ಯ ಇರಬೇಕು. ಪರಿಸರದ ಜನತೆಯ ಜತೆ ಶಾಲೆಯ ಮಕ್ಕಳಿಗೆ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದು ಶ್ರೀನಿವಾಸ ಆಸ್ಪತ್ರೆಯ ಸಮಾಜಮುಖಿ ಕಾರ್ಯಕ್ಕೊಂದು ನಿದರ್ಶನವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ತಾಪಂ ಸದಸ್ಯೆ ಕವಿತಾ ದಿನೇಶ್, ಮುಖ್ಯೋಪಾಧ್ಯಾಯಿನಿ ಸವಿತಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ ಕೊಟ್ಟಾರಿ, ಶ್ರೀನಿವಾಸ ಆಸ್ಪತ್ರೆಯ ಡಾ.ಮಹೇಶ್ ಹೆಗ್ಡೆ, ಮೂಡುಶೆಡ್ಡೆ ಗ್ರಾಪಂ ಉಪಾಧ್ಯಕ್ಷೆ ಶಾಂಭವಿ, ಮಾಜಿ ಅಧ್ಯಕ್ಷ ಉಮೇಶ್, ಶರಣ್, ಕಿಶೋರ್, ನಿವೇದಿತಾ ಎಂ., ಸಂತೋಷ್, ಹರೀಶ್ ಉಪಸ್ಥಿತರಿದ್ದರು. ಶ್ರೀನಿವಾಸ ಆಸ್ಪತ್ರೆಯ ಮಾರುಕಟ್ಟೆ ಮುಖ್ಯ ಸಲಹೆಗಾರ ಭಾಸ್ಕರ ಅರಸ್ ಸ್ವಾಗತಿಸಿ, ವಂದಿಸಿದರು.

ಶಿಬಿರದಲ್ಲಿ 2000 ಮಂದಿ ಭಾಗಿ

ಮಕ್ಕಳ ವಿಭಾಗ, ಸ್ತ್ರೀರೋಗ ವಿಭಾಗ, ಕಣ್ಣಿನ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ವೈದ್ಯಕೀಯ, ಎಲುಬು ಮತ್ತು ಕೀಲು, ಶ್ವಾಸಕೋಶ, ಶಸ್ತ್ರಚಿಕಿತ್ಸಾ ವಿಭಾಗ ಸೇರಿದಂತೆ ಎಂಟು ವಿಭಾಗದಲ್ಲಿ ನಡೆದ ಶಿಬಿರದ ಪ್ರಯೋಜನವನ್ನು ಸುಮಾರು 200ಕ್ಕೂ ಅಧಿಕ ಮಂದಿ ಪಡೆದರು.

ಆರೋಗ್ಯ ಕಾರ್ಡ್ ವಿತರಣೆ

ಶ್ರೀನಿವಾಸ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಶ್ರೀನಿವಾಸ ಆರೋಗ್ಯ ಕಾರ್ಡ್‌ನ್ನು ಶಾಸಕ ಉಮಾನಾಥ ಕೋಟ್ಯಾನ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಜನತೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ರಿಯಾಯಿತಿ ದರದ ಆರೋಗ್ಯ ಕಾರ್ಡ್ ಚಿಕಿತ್ಸೆಗೆ ಸಹಕಾರಿ ಯಾಗಲಿದೆ. ಜನತೆ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿ ಶಿಬಿರಕ್ಕೆ ಶುಭ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News