ಲವ್ ಜಿಹಾದ್ ಗೆ ಪ್ರೋತ್ಸಾಹ ಆರೋಪ: 'ಕೇದರನಾಥ್' ಚಿತ್ರಕ್ಕೆ ನಿಷೇಧ ಹೇರಲು ಪುರೋಹಿತರ ಒತ್ತಾಯ

Update: 2018-11-04 17:19 GMT

ಸುಷಾಂತ್ ಸಿಂಗ್ ರಜಪೂತ್ ಮತ್ತು ಸಾರಾ ಅಲಿ ಖಾನ್ ನಟನೆಯ ಕೇದರನಾಥ್ ಚಿತ್ರಕ್ಕೆ ಹೊಸ ಸಂಕಷ್ಟ ಎದುರಾಗಿದೆ. ಚಿತ್ರವು ಲವ್ ಜಿಹಾದನ್ನು ಪ್ರೋತ್ಸಾಹಿಸುತ್ತದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕೇದರನಾಥದ ಪುರೋಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

“ಈ ಚಿತ್ರಕ್ಕೆ ನಿಷೇಧ ಹೇರದಿದ್ದಲ್ಲಿ ನಾವು ಹೋರಾಟವನ್ನು ಆರಂಭಿಸಲಿದ್ದೇವೆ. ಲವ್ ಜಿಹಾದನ್ನು ಪ್ರೋತ್ಸಾಹಿಸುವ ಮೂಲಕ ಈ ಚಿತ್ರವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಕೇದಾರ್ ಸಭಾದ ಚೇರ್ ಮೆನ್ ವಿನೋದ್ ಶುಕ್ಲಾ ಹೇಳಿದ್ದಾರೆ.

‘ಕೇದರನಾಥ್’ ಚಿತ್ರದ ಮೂಲಕ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಅಭಿಷೇಕ್ ಕಪೂರ್ ನಿರ್ದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News