ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-11-05 16:09 GMT

ಹಿರಿಯಡ್ಕ, ನ.5: ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯ ಪೂಪಾಡಿ ಕಲ್ಲು ಎಂಬಲ್ಲಿ ನ. 5ರಂದು ಬೆಳಗ್ಗೆ 6:45ರ ಸುಮಾರಿಗೆ ನಡೆದಿದೆ.

ಮೃತರನ್ನು ಶಿರ್ವ ಮಟ್ಟಾರು ನಿವಾಸಿ ಹರಿಪ್ರಸಾದ ಯಾನೆ ಮುನ್ನ(35) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಪೆರ್ಣಂಕಿಲದ ಆಲ್ವಿನ್ ಮಣಿಪಾಲ ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈರಂಜೆ ಕಡೆಯಿಂದ ಬರುತ್ತಿದ್ದ ಬೈಕ್ ಕಾರ್ಕಳ-ಉಡುಪಿ ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿದ ಪರಿಣಾಮ ಕಾರ್ಕಳದಿಂದ ಉಡುಪಿ ಕಡೆಗೆ ಹೋಗು ತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಹರಿ ಪ್ರಸಾದ ಸ್ಥಳದಲ್ಲೇ ಮೃತಪಟ್ಟ ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News